Wednesday, May 8, 2024
spot_imgspot_img
spot_imgspot_img

ಮೂಡಬಿದಿರೆ: ಉದ್ಯಮಿ ಆಶಿತ್ ಕುಮಾರ್ ಗುರುಪುರ ನದಿಗೆ ಹಾರಿ ಆತ್ಮಹತ್ಯೆ..!

- Advertisement -G L Acharya panikkar
- Advertisement -
vtv vitla

ಮೂಡುಬಿದಿರೆ: ಆರ್ಥಿಕ ಮುಗ್ಗಟ್ಟಿನಿಂದ ನೊಂದು ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದು ಉದ್ಯಮಿಯಾಗಿದ್ದರು. ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಸ್ಥಾಪಿಸಿ ಮುನ್ನಡೆಸಿದ್ದರು.

ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಉದ್ಯಮವನ್ನು ಮುಚ್ಚಿ ಮಂಗಳೂರಿನಲ್ಲಿ ಖಾಸಗಿ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇರ್ಪಡೆಗೊಂಡು ಮಂಗಳೂರಿನಲ್ಲಿ ನೆಲೆಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಮೂಡುಬಿದಿರೆ ತ್ರಿಭುವನ್ ಜೇಸಿಐ ಅಧ್ಯಕ್ಷರಾಗಿ, ವಲಯ 15ರ ವಲಯಾಧಿಕಾರಿ, ವಲಯಾಧ್ಯಕ್ಷರಾಗಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು. ಕೇಳದಪೇಟೆ ಬಸದಿಯ ಜೀರ್ಣೋದ್ಧಾರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. ಮೃತರು ಪತ್ನಿ , ಪುತ್ರನನ್ನು ಅಗಲಿದ್ದಾರೆ.

- Advertisement -

Related news

error: Content is protected !!