Wednesday, July 2, 2025
spot_imgspot_img
spot_imgspot_img

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 27 ಮಂದಿ ಸಾವು

- Advertisement -
- Advertisement -

ನವದೆಹಲಿ: ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಸನಿಹದಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಬೆಂಕಿ ದುರಂತ ಸಂಭವಿಸಿತ್ತು. ಆ ವೇಳೆ ಸುಮಾರು 20ಕ್ಕೂ ಹೆಚ್ಚು ಮಂದಿ ದುರಂತಕ್ಕೆ ಬಲಿಯಾಗಿದ್ದಾರೆಂದು ಹೇಳಲಾಗಿತ್ತು. ಆದರೆ ಇದೀಗ ದುರಂತದಲ್ಲಿ ಮಡಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ರಾತ್ರಿ 11 ಗಂಟೆ ವೇಳೆಗೆ 26 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸುಮಾರು 7 ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸಲು ಹರಸಾಹಸ ಪಡಲಾಯಿತು. ಸದ್ಯ ಬೆಂಕಿ ಆವರಿಸಿಕೊಂಡಿರುವುದು ನಿಂತಿದ್ದರೂ ದಟ್ಟ ಹೊಗೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 70ಕ್ಕೂ ಹೆಚ್ಚು ಜನ ಕಟ್ಟಡದಲ್ಲಿದ್ದರು. ಸಂಪೂರ್ಣ ಕಟ್ಟಡವನ್ನು ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ, ಕಿಟಕಿಗಳನ್ನು ಒಡೆದು ಹಗ್ಗಗಳ ಮುಖಾಂತರ ಕೆಲವರನ್ನು ಕಟ್ಟಡದಿಂದ ಹೊರ ತರಲಾಗಿದೆ. ಬೆಂಕಿ ಸಂಪೂರ್ಣ ಕಟ್ಟಡವನ್ನು ಆವರಿಸಿದ್ದರಿಂದ ಕಿಟಕಿಗಳನ್ನು ಒಡೆದು ಹಗ್ಗಗಳನ್ನು ಬಳಸಿ ಕೆಲವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಸಿಸಿ ಕ್ಯಾಮರಾ ಮತ್ತು ವೈ ಫೈ ರೂಟರ್‍ ತಯಾರಿಸುವ ಕೆಲಸ ಮೊದಲ ಅಂತಸ್ತಿನಲ್ಲಿ ನಡೆಯುತ್ತಿತ್ತು. ಘಟನೆ ಸಂಬಂಧ ಸಂಸ್ಥೆ ಮಾಲಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್ ಉಪ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

- Advertisement -

Related news

error: Content is protected !!