Saturday, April 20, 2024
spot_imgspot_img
spot_imgspot_img

ಮೇ.25 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ..! ವಧುವರರಿಗೆ ಯಾವೆಲ್ಲಾ ಸೌಲಭ್ಯಗಳಿದೆ ಗೊತ್ತಾ..?

- Advertisement -G L Acharya panikkar
- Advertisement -

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ.25 ರಂದು ಬೆಳಗ್ಗೆ 10.50 ರಿಂದ 11.40 ರವರೆಗೆ ನೆರವೇರುವ ಕಟಕ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ. ಈ ವಿವಾಹಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ದೇವಳದ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಳ್ಳಬಹುದು.

ಮೇ 4 ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ 8 ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ರ್ಪಕಟಿಸಲಾಗುವುದು. ಮೇ 13 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮೇ 15 ರಂದು ವಧು-ವರರ ಅಂತಿಮ ಪಟ್ಟಿ ಪಕಟಿಸಲಾಗುವುದು.

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪತಿ, ಪಾಸ್‌ಪೋರ್ಟ್ ಸೈಜ್‌ನ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್‌ ಖಾತೆ ಸಂಖ್ಯೆಯ ದಾಖಲೆ ಪತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು

ಸರಳ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಅವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏ. 27 ರಂದು ಧರ್ಮಸ್ಥಳದಲ್ಲಿ ಹಸೆಮಣೆ ಏರಲಿದ್ದಾರೆ 200 ಜೋಡಿ..!!

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27 ಬುಧವಾರ ಸಂಜೆ 6.50ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಈ ಬಾರಿ ಸುಮಾರು 200 ಜೋಡಿಯ ಕಲ್ಯಾಣ ನಡೆಯಲಿದೆ. ವಧೂವರರಿಗೆ ದೇಗುಲದ ವತಿಯಿಂದ ಕರಿಮಣಿ, ತಾಳಿ, ಉಡುಪು ಮತ್ತು ಹೂವಿನ ಹಾರವನ್ನು ವಿತರಿಸಲಿದ್ದು, ಇದರ ಜೊತೆಗೆ ನವ ವಿವಾಹಿತರಿಗೆ ಕ್ಷೇತ್ರದಿಂದ ತಲಾ 5000 ಮೌಲ್ಯದ ಡೈನಿಂಗ್, ಡಿನ್ನರ್ ಸೆಟ್ ಸೇರಿದಂತೆ ಅಡುಗೆ ಪರಿಕರಗಳನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ಸಂಘಟಕರು ಘೋಷಿಸಿದ್ದಾರೆ.

ಇನ್ನು ಈ ಬಾರಿ 50ನೇ ವರ್ಷದ ಸಾಮೂಹಿಕ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆಯಾಗಿ ಸ್ಯಾಂಡಲ್’ವುಡ್ ಸ್ಟಾರ್ ಗೋಲ್ಡನ್ ಸ್ಟಾರ್ ಗಣೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಲಿದ್ದಾರೆ.

- Advertisement -

Related news

error: Content is protected !!