- Advertisement -
- Advertisement -
ಬೆಂಗಳೂರು: ಮೈಸೂರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನ ಬಂಧಿಸಿರುವ ಪೊಲೀಸ್ ಅಧಿಕಾರಿಗಳಿಗೆ ನಟ ಜಗ್ಗೇಶ್ ₹1ಲಕ್ಷ ಬಹುಮಾನ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್.. ‘ಕಾಲೇಜು ವಿಧ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ಅಭಿನಂದನೆಗಳು. ನಮ್ಮ ರಾಜ್ಯದ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಕಡೆಯಿಂದ ಪ್ರಕರಣ ಭೇದಿಸಿರುವ ನಲ್ಮೆಯ ಪೊಲೀಸರಿಗೆ ₹1 ಲಕ್ಷ ಬಹುಮಾನ ನೀಡಲಿದ್ದೇನೆ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೊಲೀಸ್’ ಎಂದು ಬರೆದಿದ್ದಾರೆ.
- Advertisement -