Monday, April 29, 2024
spot_imgspot_img
spot_imgspot_img

ಯುವತಿಯರನ್ನು ಚುಡಾಯಿಸಿದ ಅನ್ಯಕೋಮಿನ ಯುವಕರನ್ನು ಪ್ರಶ್ನಿಸಿದ್ದೇ ತಪ್ಪಾ..? – ಹಿಂದೂ ಯುವಕ ಮೇಲೆ ಹಲ್ಲೆ

- Advertisement -G L Acharya panikkar
- Advertisement -

ಶಿವಮೊಗ್ಗ: ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹರ್ಷ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಇದರ ಬೆನ್ನಲ್ಲೇ, ಮತ್ತೋರ್ವ ಹಿಂದೂ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ಹರ್ಷ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದರು.

ಬಜರಂಗದಳ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ನಿನ್ನೆ ರಾತ್ರಿ 10 ಗಂಟೆ 20 ನಿಮಿಷ ರ ಸಮಯದಲ್ಲಿ ರಾಜೀವ್ ಗಾಂಧಿ ಬಡಾವಣೆಯ ಮೊದಲನೇ ತಿರುವಿನಲ್ಲಿರುವ ಕಾಂತರಾಜು (27) ಎಂಬುವವರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

 ಹಳೇ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ಮೇಲ್ನೋಟಕ್ಕೆ ಹೇಳಲಾಗುತ್ತಿದೆ. ದಾಳಿ ವೇಳೆ ಎರಡೂ ಕೈಗಳು ಸೇರಿ ದೇಹದ ಹಲವೆಡೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕೋಟೆ ಠಾಣೆ ಪೊಲೀಸರು ಕೆಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆಯಾದರೂ ಮಾಹಿತಿ ಸ್ಪಷ್ಟವಾಗಿಲ್ಲ.

ಹಲ್ಲೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂತರಾಜ್, ರಾತ್ರಿ ಮೂತ್ರ ವಿಸರ್ಜನೆಗೆಂದು ತೆರಳಿದ್ದಾಗ ನಾಲ್ಕೈದು ಮಂದಿ ನನ್ನ ಮೇಲೆ ದಾಳಿ ಮಾಡಿದರು. ನನ್ನನ್ನು ಕೆಳಕ್ಕೆ ಬೀಳಿಸಿ ಹಲ್ಲೆ ಮಾಡಿದರು. ಅಷ್ಟರಲ್ಲಿ ಅವರ ಕೈಯಲ್ಲಿದ್ದ ಮಚ್ಚನ್ನು ಕಸಿದುಕೊಂಡು ಮನೆಗೆ ಓಡಿ ಬಂದೆ. ಫೋನ್ ಮಾಡಿ ಹುಡುಗರನ್ನು ಕರೆಸಿಕೊಂಡೆ. ಅಷ್ಟೊತ್ತಿಗೆ ಅವರೆಲ್ಲಾ ತಪ್ಪಿಸಿಕೊಂಡು ಹೋದರು. ಹರ್ಷನ ಅಂತಿಮಯಾತ್ರೆ ವೇಳೆ ಮೆರವಣಿಗೆಯಲ್ಲಿದ್ದೆ. ಈತನೂ ಇದ್ದಾನಲ್ಲ ಎಂಬ ಹಳೇ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆ ಎಂದರು.

- Advertisement -

Related news

error: Content is protected !!