Sunday, May 19, 2024
spot_imgspot_img
spot_imgspot_img

ಯುವವಾಹಿನಿ (ರಿ.) ವಿಟ್ಲ ಘಟಕದ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

- Advertisement -G L Acharya panikkar
- Advertisement -

ಯುವವಾಹಿನಿ (ರಿ.) ವಿಟ್ಲ ಘಟಕದ ಮಹಾಸಭೆಯು ದಿನಾಂಕ 12 -12 -2022 ರಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಯಶವಂತ್ ಎನ್ ವಹಿಸಿದ್ದರು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಹರೀಶ್ .ಕೆ ವಿಟ್ಲರವರು ವಾಚಿಸಿದರು. ಆ ಬಳಿಕ ಲೆಕ್ಕಪತ್ರ ಮಂಡನೆ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆ ನಡೆದು ಘಟಕದ ಅಧ್ಯಕ್ಷರಾಗಿ ಅವಿನಾಶ್ ಪೂಜಾರಿ ಬೊಳಂತಿಮೊಗರು ಆಯ್ಕೆಯಾದರು. ಈ ಸಂದರ್ಭ ಯುವ ವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಸಲಹೆ ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷ ಹರೀಶ್ ಸಿಎಚ್, ಯುವವಾಹಿನಿಯ ಉಪಾಧ್ಯಕ್ಷ ಹರೀಶ್ ಪಾಣಿಮಜಲು, ನಿಖಿಲ್ ಸಾಲ್ಯಾನ್ ನಿಡ್ಯ , ಯುವವಾಹಿನಿ ಕಡಬ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಉಪಸ್ಥಿತರಿದ್ದರು.

ಅಧ್ಯಕ್ಷರಾದ ಯಶವಂತ್ ಎನ್ ರವರು ಸದಸ್ಯರೆಲ್ಲರ ಸಹಕಾರಕ್ಕಾಗಿ ಕೃತಜ್ಞತೆಗಳನ್ನು ಸಮರ್ಪಿಸಿ ಇನ್ನು ಮುಂದೆಯೂ ಮುಂದಿನ ಅಧ್ಯಕ್ಷರ ಅವಧಿಯಲ್ಲಿಯೂ ಯುವವಾಹಿನಿಗೆ ಸಂಪೂರ್ಣ ಸಹಕಾರವನ್ನು ನೀಡಿ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗುವಂತೆ ಯುವವಾಹಿನಿಯೊಂದಿಗೆ ಕೈಜೋಡಿಸುವಂತೆ ವಿನಂತಿಸಿದರು.

- Advertisement -

Related news

error: Content is protected !!