Friday, April 26, 2024
spot_imgspot_img
spot_imgspot_img

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಅಂತ್ಯ; ಸಚಿವ ಸ್ಥಾನಕ್ಕಾಗಿ ಮತ್ತೆ ಪಟ್ಟು ಹಿಡಿಯಲಿದ್ದಾರಾ ಜಾರಕಿಹೊಳಿ..!

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅಂತ್ಯಕಂಡಿದೆ. ರಮೇಶ್ ಜಾರಕಿಹೊಳಿ ಅವರು ತನ್ನ ಮೇಲಿದ್ದ ಲೈಂಗಿಕ ದೌರ್ಜನ್ಯ ಕೇಸ್ ನಿಂದ ಮುಕ್ತರಾಗಿದ್ದಾರೆ.

ವಿಶೇಷ ತನಿಖಾ ದಳ ಇಂದು ಈ ಬಗ್ಗೆ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದು ಎಸ್‌ಐಟಿ ಎಸಿಪಿ ಕವಿತಾ ಅವರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ವರದಿಯಲ್ಲಿ ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ತನ್ನನ್ನು ಉದ್ಯೋಗ ಕೊಡಿಸುವುದಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದರು.

ರಮೇಶ್ ಜಾರಕಿಹೊಳಿ ಈ ಕೇಸ್ ದೇಶದಾದ್ಯಂತ ತಲ್ಲಣ ಸೃಷ್ಟಿಸಿತ್ತು. ಕೊನೆಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಾವ ಕಾರಣಕ್ಕೆ ಸಚಿವ ಸ್ಥಾನ ಕಳೆದುಕೊಂಡರೋ ಅದೇ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿರೋದರಿಂದ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೆ ಸೇರಲಿದ್ದಾರೆಯೇ ಎಂಬುವುದನ್ನು ಕಾದು ನೋಡಬೇಕಿದೆ.

- Advertisement -

Related news

error: Content is protected !!