Saturday, May 18, 2024
spot_imgspot_img
spot_imgspot_img

ರವಿ ಡಿ. ಚನ್ನಣ್ಣನವರ್ ಸೇರಿ ಕರ್ನಾಟಕದ 9 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

- Advertisement -G L Acharya panikkar
- Advertisement -
suvarna gold

ಬೆಂಗಳೂರು: ಕರ್ನಾಟಕದಲ್ಲಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸಿಐಡಿ ಎಸ್​ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರವಿ ಚನ್ನಣ್ಣನವರ್ ನೇಮಕವಾಗಿದ್ದಾರೆ. 2 ದಿನಗಳ ಹಿಂದಷ್ಟೇ 19 ಉನ್ನತ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಇದೀಗ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಆದೇಶ ಹೊರಡಿಸಿದೆ.

vtv vitla
vtv vitla

ಉಳಿದಂತೆ ಭೀಮಾಶಂಕರ ಗುಳೇದ್- ಡಿಸಿಪಿ, ಬೆಂಗಳೂರು ಪೂರ್ವ, ಡಿ. ಕಿಶೋರ್ ಬಾಬು- ಬೀದರ್ ಪೊಲೀಸ್ ವರಿಷ್ಠಾಧಿಕಾರಿ, ಅರುಣಾಂಗ್ಶು ಗಿರಿ- ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ, ಡಿ.ಎಲ್. ನಾಗೇಶ್- ಸಿಐಡಿ ಎಸ್‌ಪಿ, ಅಬ್ದುಲ್ ಅಹಾದ್- ಕೆಎಸ್‌ಆರ್‌ಟಿಸಿ ನಿರ್ದೇಶಕ, ಟಿ. ಶ್ರೀಧರ್- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ, ಟಿ.ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ ಹಾಗೂ ದಿವ್ಯಸಾರ ಥಾಮಸ್- ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸಿಐಡಿ ಎಸ್​​ಪಿ ಹುದ್ದೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಶಡ್ಯೂಲ್ ಟ್ರೈಬ್ ಡೆವಲಪ್ಮೆಂಟ್ ಕಾರ್ಪೊರೇಷನ್ ಎಂಡಿ ಆಗಿ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಐಡಿ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಅಗಿ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹಾದ್ ಅವರನ್ನು ಎಸಿಬಿ ಎಸ್​ಪಿಯಿಂದ ಕೆಎಸ್​ಆರ್​​ಟಿಸಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಟಿ ಶ್ರೀಧರ್ ಅವರನ್ನು ಕೊಪ್ಪಳ ಎಸ್​ಪಿ ಹುದ್ದೆಯಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿಯಾಗಿ ವರ್ಗಾಯಿಸಲಾಗಿದೆ.

ಟಿ.ಪಿ ಶಿವಕುಮಾರ್ ಅವರನ್ನು ಬಂಧೀಖಾನೆ ಎಸ್​ಪಿಯಿಂದ ಚಾಮರಾಜನಗರ ಎಸ್​ಪಿಯಾಗಿ, ದಿವ್ಯಸಾರ ಥಾಮಸ್ ಅವರನ್ನು ಚಾಮರಾಜನಗರ ಎಸ್​ಪಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ, ಡೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಎಸ್​ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅರುಣಾಂಗ್ಶು ಗಿರಿ ಅವರನ್ನು ಎಸಿಬಿ ಎಸ್ ಪಿಯಿಂದ ಕೊಪ್ಪಳ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಡಿ.ಎಲ್. ನಾಗೇಶ್ ಅವರನ್ನು ಬೀದರ್ ಎಸ್​ಪಿಯಿಂದ ಸಿಐಡಿ ಎಸ್​ಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

vtv vitla
vtv vitla
- Advertisement -

Related news

error: Content is protected !!