Saturday, May 4, 2024
spot_imgspot_img
spot_imgspot_img

ರಸ್ತೆಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟ

- Advertisement -G L Acharya panikkar
- Advertisement -
vtv vitla

ಶಿವಮೊಗ್ಗ: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್​ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ಸ್ಫೋಟ ಸಂಭವಿಸಿದೆ. ರಿಪ್ಪನ್​ ಪೇಟೆ ಮೂಲದ ಕೃಷ್ಣ ಎಂಬುವರು ರೋಗಿಯೊಬ್ಬರನ್ನು ನೋಡಲು ರಸ್ತೆ ಬದಿ ಕಾರು ನಿಲ್ಲಿಸಿ ಸರ್ಜಿ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಡ್ರೈವರ್​ ಸೀಟ್​ ಹಿಂಬದಿ ಕವರ್​ನಲ್ಲಿ ಇಟ್ಟಿದ್ದ ಮೊಬೈಲ್ ಸ್ಫೋಟಿಸಿದೆ.​ ಅವಘಡದಲ್ಲಿ ಸೀಟಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಸ್ಥಳೀಯರು ನೋಡಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!