Sunday, June 29, 2025
spot_imgspot_img
spot_imgspot_img

ಸುಬ್ರಹ್ಮಣ್ಯ: ರಸ್ತೆಯ ಬಳಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಹೋರಿ ಪತ್ತೆ; ಪೊಲೀಸ್ ಠಾಣಾಧಿಕಾರಿ, ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಸ್ಥಳೀಯರಿಂದ ರಕ್ಷಣೆ

- Advertisement -
- Advertisement -

ಸುಬ್ರಹ್ಮಣ್ಯ: ಶೇಷಕುಟೀರ ವಸತಿ ಗೃಹದ ಮುಂದೆ ರಸ್ತೆಯ ಬಳಿ ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾದ ಹೋರಿಯೊಂದನ್ನು, ಕುಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬೂರಾಜ್ ಮಹಾಜನ್ ಮತ್ತು ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ ಕಾರ್ಯಕರ್ತರು ಹಾಗೂ ಊರವರು ಸೇರಿ ರಕ್ಷಣೆ ಮಾಡಿದ ಘಟನೆ ನಡೆದಿದೆ.

ಶೇಷಕುಟೀರ ವಸತಿ ಗೃಹದ ರಸ್ತೆಯ ಬಳಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಹೋರಿಯೊಂದು ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಹಾಗೂ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಅವರು ಸ್ವತಃ ಹೋರಿಯ ರಕ್ಷಣಾ ಕಾರ್ಯದಲ್ಲಿ ತೊಡಗಿ ಪ್ರಾಣಿದಯೆ ತೋರಿಸಿದರು. ಹೋರಿಯ ಒಂದು ಕಾಲು ಮುರಿತಗೊಂಡಿದ್ದು. ಪಶು ವೈದ್ಯಾಧಿಕಾರಿ ಡಾ.ವೆಂಕಟಾಚಲಪತಿ ಅವರು ಪ್ರಥಮ ಚಿಕಿತ್ಸೆಯನ್ನು ನೀಡಿ, ಬಳಿಕ ಸುಬ್ರಮಣ್ಯ ಗ್ರಾಮ ಪಂಚಾಯತಿ ಕಸ ವಿಲೇವಾರಿ ಘಟಕದಲ್ಲಿ ಹೋರಿಗೆ ಆಶ್ರಯ ಕಲ್ಪಿಸಿದ್ದಾರೆ. ಅಕ್ರಮ ಕಸಾಯಿಖಾನೆಗೆ ಹೋರಿಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ವಾಹನದಿಂದ ಬಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರಕ್ಷಣಾ ಕಾರ್ಯದಲ್ಲಿ ವಿಶ್ವ ಹಿಂಧೂ ಪರಿಷತಿನ ಅಧ್ಯಕ್ಷರು ಅಶೋಕ್ ಆಚಾರ್ಯ, ಕಾರ್ಯದರ್ಶಿ ಲಕ್ಷೀಶ್, ಭಜರಂಗದಳ ಸಾಯೋಜಕ ಮಹೇಶ್ ಗುಡ್ಡೆಮನೆ, ಗೋವು ರಕ್ಷಕ ಪ್ರಮುಖ ಜೀವನ್ ಪರ್ವತಮುಖಿ ಸುಬ್ರಹ್ಮಣ್ಯ, ಪ್ರಖಂಡ ಸಾಯೋಜಕ ವಿಗ್ನೇಶ್ ಸುಳ್ಯ, ಹರೀಶ್ ಮನಿರಾಜ್, ಅಶ್ವಥ್, ಕಾರ್ತಿಕ್ ರಾವ್ ಪಾಲ್ಗೊಂಡಿದ್ದರು.

- Advertisement -

Related news

error: Content is protected !!