Thursday, May 9, 2024
spot_imgspot_img
spot_imgspot_img

” ರಾಕಿ ಭಾಯ್ ತರ ಸಬ್ ಕಾ ಬಾಪ್ ಆಗುವಾಸೆ”.! ನಾಲ್ವರು ಅಮಾಯಕರ ಕೊಲೆ ಮಾಡಿದ ಯುವಕ

- Advertisement -G L Acharya panikkar
- Advertisement -
astr

ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ್ದಾನೆ.

ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್​ನನ್ನು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್​ ಪೊಲೀಸರ ಹತ್ಯೆಯಾಗಿತ್ತಂತೆ!.

ಕೆಜಿಎಫ್​​ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ಕೊಲೆ ಮಾಡಿದ ವ್ಯಕ್ತಿಯೊಬ್ಬನಿಂದ ಕದ್ದಿದ್ದ ಮೊಬೈಲ್​ ಫೋನ್​ ಟ್ರ್ಯಾಕ್​ ಮಾಡಿ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಸೆಕ್ಯುರಿಟಿ ಗಾರ್ಡ್​ಗಳು ಮಲಗಿದ್ದ ವೇಳೆಯಲ್ಲಿ ಶಿವಪ್ರಸಾದ್​ ಈ ಕೃತ್ಯ ಎಸಗಿದ್ದಾನೆ. ಸಾಗರ್​ ಜಿಲ್ಲೆಯಲ್ಲಿ ಮೂವರು, ಭೋಪಾಲ್​ನಲ್ಲಿ ಒಬ್ಬರನ್ನು ಈತ ಹತ್ಯೆ ಮಾಡಿದ್ದಾನೆ. ಈ ಪೈಕಿ ಒಂದು ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಆರೋಪಿಯು ಸೆಕ್ಯುರಿಟಿ ಗಾರ್ಡ್​ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ, ನಂತರ ತನ್ನನ್ನು ಯಾರೂ ನೋಡಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡು ಪರಾರಿಯಾಗಿದ್ದಾನೆ.

- Advertisement -

Related news

error: Content is protected !!