- Advertisement -
- Advertisement -
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನ ಮನೆ ಮೇಲಿನ ಐಟಿ (IT) ದಾಳಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪ ಅವರು ನಮ್ಮ ಸರ್ವೋಚ್ಚ ನಾಯಕ, ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಮೇಲೆ ಐಟಿ ದಾಳಿ ನಡೆಸಲಾಗುತ್ತದೆ ಎಂದರು.
- Advertisement -