- Advertisement -
- Advertisement -
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನೀಕಾಂತ್ ಅವರು ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದರು. ಈ ಬಗ್ಗೆ ಭವಿಷ್ಯದಲ್ಲಿ ರಾಜಕೀಯ ಪ್ರವೇಶದ ಕುರಿತು ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ರಾಜಕೀಯ ಪ್ರವೇಶಿಸಲಿದ್ದೇನೆಯೇ ಎಂಬ ಬಗ್ಗೆ ಪ್ರಶ್ನೆಗಳಿವೆ… ನಾನು ಇದೆಲ್ಲವನ್ನು ಆರ್ ಎಂಎಂ ಪದಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಘೋಷಣೆ ಮಾಡುತ್ತೇನೆ ಎಂದು ನಟ ಸೋಮವಾರ ಹೇಳಿದ್ದಾರೆ. ‘ಕೋವಿಡ್, ಚುನಾವಣೆಗಳು ಮತ್ತು ಚಿತ್ರೀಕರಣ ಮತ್ತು ಯುಎಸ್ ನಲ್ಲಿ ವೈದ್ಯಕೀಯ ತಪಾಸಣೆಯಿಂದಾಗಿ ನಾನು ಈ ಮೊದಲು ಕಾರ್ಯಕರ್ತರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು, ಕೇವಲ ಅಭಿಮಾನಿಗಳ ಸಂಘವನ್ನು ಉಳಿಸಿಕೊಳ್ಳುವುದಾಗಿ ಹೇಳಿದ್ದಾರೆ.
- Advertisement -