Monday, June 30, 2025
spot_imgspot_img
spot_imgspot_img

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಅಂಗಾರ..! ಚುನಾವಣಾ ಪ್ರಚಾರ ಕಣದಲ್ಲೂ ಇರಲ್ಲ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದೆ. ಒಂದರ ಮೇಲೊಂದರಂತೆ ಬಿಜೆಪಿ ನಾಯಕರು ನಿವೃತ್ತಿ ಘೋಷಿಸುತ್ತಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆಎಸ್ ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಈಗ ಸುಳ್ಯದ ಬಂಗಾರವೆಂದೇ ಖ್ಯಾತಿ ಪಡೆದಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್. ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಖಾಸಗಿ ಮಾದ್ಯವೊಂದರಲ್ಲಿ ವಿಶೇಷ ಸಂದರ್ಶನದಲ್ಲಿ ತನ್ನ ಮನದಾಳದ ಮಾತು ಹಂಚಿಕೊಂಡಿದ್ದಾರೆ.

ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

- Advertisement -

Related news

error: Content is protected !!