- Advertisement -
- Advertisement -
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು , 31 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಅವರು ಎಲ್ ಟಿಟಿಇ ಉಗ್ರರಿಂದ ತಮಿಳುನಾಡಿನಲ್ಲಿ ಹತ್ಯೆಗೀಡಾಗಿದ್ದರು.
- Advertisement -