- Advertisement -
- Advertisement -


ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಈ ಎಂಟು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸೂಚನೆಯಿದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.



- Advertisement -








