- Advertisement -
- Advertisement -
ಬೆಂಗಳೂರು: ರಾಜ್ಯದ ವಿವಿಧೆಡೆ ಏಪ್ರಿಲ್ 25ರ ತನಕ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಹಲವೆಡೆ ಕಳೆದ ವಾರ ಪೂರ್ವ ಮುಂಗಾರು ಮಾರುತಗಳ ದೆಸೆಯಿಂದ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆದಿದ್ದರೂ, ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
- Advertisement -