ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಹೇಳಲಾಗಿದೆ. ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಚಿ.ನಾ ರಾಮು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಛಲವಾದಿ ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊ0ಡಿದ್ದರೂ ಎಲ್ಲವನ್ನೂ ಜಾಣತನದಿಂದ ಮುಚ್ಚಿಟ್ಟು ಬಿಜೆಪಿಗೆ ನುಗ್ಗಿ ನಾಯಕರನ್ನು ವಂಚಿಸಿ, ದಿಕ್ಕುತಪ್ಪಿಸಿ ಅವರಿಗೆ ಸಂಬ0ಧಪಡದ ಎಸ್ಸಿ ಮೋರ್ಚಾ ಸೇರಿದ್ದಾರೆ. ಗುಟ್ಟಾಗಿ ಪ್ರತಿ ಭಾನುವಾರ ಚರ್ಚ್ ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ನಾರಾಯಣಸ್ವಾಮಿ ಕ್ರೈಸ್ತ ಮಹಿಳೆಯನ್ನು ಮದುವೆಯಾದ ಬಳಿಕ ಮತಾಂತರವಾಗಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಚಿ.ನಾ ರಾಮು ಪ್ರತಿಕ್ರಿಯೇ ನೀಡಿದ್ದು, ಅವರ ಮಕ್ಕಳಿಗೂ ಅದೇ ಧರ್ಮದಲ್ಲಿ ಹೆಣ್ಣು ತಂದು ಇಡೀ ಕುಟುಂಬವೇ ಕ್ರೈಸ್ತ ಧರ್ಮವನ್ನು ಶ್ರದ್ಧೆಯಿಂದ ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅನ್ಯ ಧರ್ಮಕ್ಕೆ ಮತಾಂತರ ಆಗುವುದನ್ನು ಪ್ರತಿ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸುತ್ತಾರೆ. ಹಿಂದೂ ಧರ್ಮ ವಿಶ್ವಕ್ಕೆ ಬೆಳಕು ತೋರಿದ ಧರ್ಮವಾಗಿದ್ದು, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ ಅವರು ಕದ್ದುಮುಚ್ಚಿ ಕ್ರೈಸ್ತ ಧರ್ಮ ಪಾಲನೆ ಮಾಡುತ್ತಿದ್ದಾರೆ ಎಂಬುದೇ ಸತ್ಯವೇ ಆಗಿದ್ದಾರೆ. ಅವರು ಕೂಡಲೇ ಘರ್ ವಾಪಸಿ ಆಗಬೇಕು ಎಂದು ಆಗ್ರಹಿಸಿದ್ದಾರೆ.