- Advertisement -
- Advertisement -
ಬೆಳ್ತಂಗಡಿ: ರಾತ್ರಿ ವೇಳೆ ವಾಹನ ನಿಲ್ಲಿಸಿಕೊಂಡು ಕಾಂಗ್ರೆಸ್ ಮುಖಂಡ ಹಾಗೂ ಕಾರ್ಯಕರ್ತ ಕಿತ್ತಾಟ ನಡೆಸಿದ ಘಟನೆ ನಡೆದಿದ್ದು ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಪೇಟೆಯಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ಪುರುಷೋತ್ತಮ ಹಾಗೂ ಕಾರ್ಯಕರ್ತ ಕಿರಣ್ ಮಧ್ಯೆ ವೈಯುಕ್ತಿಕ ವಿಷಯಕ್ಕೆ ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈಯ್ದು ಕೊನೆಗೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
- Advertisement -