Wednesday, May 1, 2024
spot_imgspot_img
spot_imgspot_img

ರಾಮನಗರ: ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಬಾಲಕಿ ಮೃತ್ಯು

- Advertisement -G L Acharya panikkar
- Advertisement -
vtv vitla

ರಾಮನಗರ : ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ಜ.09ರ ಸಂಜೆ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ. ಮೃತ ಬಾಲಕಿ ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬವರ ಮಗಳು, ರಕ್ಷಿತಾ (6) ಎಂದು ಗುರುತಿಸಲಾಗಿದೆ.

ರಕ್ಷಿತಾ ಬಿಡದಿ ಬಳಿಯ ರಾಮನಹಳ್ಳಿ ಗೇಟ್‌ನ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದಳು. ಸಂಜೆ ಶಾಲೆ ಮುಗಿಸಿ ಬಸ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಪಿಚ್ಚನಕೆರೆ ಬಳಿ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿಯು ಬಸ್ಸಿನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ರಕ್ಷಿತಾ ಜಾರಿ ಕೆಳಗೆ ಬಿದ್ದು ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬಸ್‌ನಿಂದ ವಿದ್ಯಾರ್ಥಿನಿ ಬಿದ್ದು ಮರಣ ಹೊಂದಿದ ಸುದ್ದಿ ತಿಳಿದ ಕೂಡಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಬಂದು ಬಸ್ ಸಿಬ್ಬಂದಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲಿಮುಟ್ಟಿದ್ದು, ಶಾಲೆಯ ವಿರುದ್ದ ಹಾಗೂ ಸಿಬ್ಬಂದಿ ವಿರುದ್ದ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!