ಶ್ರೀ ರಾಮ ನವಮಿಯ ದಿನವಾದ ಇಂದು ದೇಶಾದ್ಯಂತ ಅರ್ಥಪೂರ್ಣವಾಗಿ ಹಬ್ಬವನ್ನು ಆಚರಿಸಲಾಗುತ್ತಿತ್ತು , ಕಲಬುರ್ಗಿಯ ಕೇಂದ್ರಿಯ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಇಂದು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು .
ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ.
ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ .
ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್ ತೀರ್ವವಾಗಿ ಖಂಡಿಸುತ್ತದೆ. ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಎಂದು ವಿದ್ಯಾರ್ಥಿ ಪರಿಷತ್ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.