- Advertisement -
- Advertisement -

ಬೆಂಗಳೂರು: ಹುತಾತ್ಮ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಾಕಿರುವವರ ವಿರುದ್ಧ ಈ ಕೂಡಲೇ ಕ್ರಮತೆಗೆದುಕೊಳ್ಳಿ ಅಂತಾ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟಪಡಿಸಿರುವ ಅವರು.. ಸಾಮಾಜಿಕ ಮಾಧ್ಯಮಗಳಲ್ಲಿ ಬಿಪಿನ್ ರಾವತ್ ಬಲಿ ಪಡೆದ ಹೆಲಿಕಾಪ್ಟರ್ ದುರಂತದ ಕುರಿತು ಆಕ್ಷೇಪಾರ್ಹ ಪೋಸ್ಟ್ಗಳು ಹರಿದಾಡುತ್ತಿವೆ. ಅಂತವರನ್ನ ಕ್ಷಮಿಸಲು ಅಸಾಧ್ಯ. ಅಕ್ಷೇಪಾರ್ಹ ಸಂದೇಶಗಳನ್ನ ನಾನು ಖಂಡಿಸುತ್ತೇನೆ. ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್ನಲ್ಲಿದ್ದ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹಾಗೂ 11 ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ದುರಂತದಲ್ಲಿ ಓರ್ವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ.



- Advertisement -