Tuesday, April 30, 2024
spot_imgspot_img
spot_imgspot_img

ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ; ನಾಲ್ವರಿಗೆ ಗಾಯ

- Advertisement -G L Acharya panikkar
- Advertisement -

ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ  ನಡೆದಿದೆ.

ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.  

ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರು‌ಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!