Sunday, May 5, 2024
spot_imgspot_img
spot_imgspot_img

ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ; ಸ್ಯಾಂಡಲ್ ವುಡ್ ನ ನಿರ್ಮಾಪಕ ಸಹಿತ ನಾಲ್ವರ ಬಂಧನ..!

- Advertisement -G L Acharya panikkar
- Advertisement -

ಬೆಂಗಳೂರು: ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸಿದ ಆರೋಪದಡಿ ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ, ಚಂದ್ರಶೇಖರ್ ಬಂಧಿತರು.

ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಿಸಿದ್ದ ಮಂಜುನಾಥ್ ಸಿನಿಮಾಗೆ ಕೋಟ್ಯಾಂತರ ರೂ. ಬಂಡವಾಳ ಹೂಡಿದ್ದರು. ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೇ ಮಂಜುನಾಥ್ ನಿಗೆ ನಷ್ಟವಾಗಿತ್ತು. ಬಳಿಕ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿಯನ್ನು ತೆರೆದಿದ್ದರು. ಬಳಿಕ ಕಡಿಮೆ ಬೆಲೆ ನಿವೇಶನ ಕೊಡಿಸುವುದಾಗಿ ಪುಷ್ಪಕುಮಾರ್ ಎಂಬುವರಿಗೆ ವಂಚಿಸಿದ್ದರು. ಹೀಗಾಗಿ ಪುಷ್ಪಕುಮಾರ್ ಪೊಲೀಸ್ ಠಾಣೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!