Sunday, May 19, 2024
spot_imgspot_img
spot_imgspot_img

ರೇಟ್‌ ವಿಚಾರಕ್ಕೆ ಜಗಳ; ಗ್ರಾಹಕನ ಎದೆಗೆ ಕತ್ತರಿಯಿಂದ ಇರಿದು ಕೊಲೆಗೈದ ಕ್ಷೌರಿಕ

- Advertisement -G L Acharya panikkar
- Advertisement -

ಗ್ರಾಹಕ ಮತ್ತು ಕ್ಷೌರಿಕನ ನಡುವೆ ರೇಟ್ ವಿಚಾರಕ್ಕೆ ವಾಗ್ವಾದ ನಡೆದಿದೆ. ಈ ವಾಗ್ವಾದ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದ ಸಲೂನ್ ಒಂದರಲ್ಲಿ ನಡೆದಿದೆ. ಸಾಗರ ಅವಟಿ(22) ಕೊಲೆಯಾದ ಗ್ರಾಹಕ. ಪ್ರಜ್ವಲ್ ಜೆಂಟ್ಸ್ ಸಲೂನ್‌ನ ಕ್ಷೌರಿಕ ಸದಾಶಿವ ನಾವಿ ಕೊಲೆ ಮಾಡಿದ ಆರೋಪಿ.

ಸಾಗರ ಎಂಬ ಯುವಕ ತಲೆಗೆ ಕಲರ್ ಮಾಡಿಸಲು ಸಲೂನ್ಗೆ ಬಂದಿದ್ದ. ತಲೆಗೆ ಬಣ್ಣ ಹಚ್ಚಲು 20 ರೂ. ಕೊಡುವುದಾಗಿ ಬಣ್ಣ ಹಚ್ಚುತ್ತಿದ್ದ ಸಲೂನ್ ಮಾಲೀಕ ಲಕ್ಷ್ಮಣಗೆ ಸಾಗರ ಹೇಳಿದ್ದ. ಮತ್ತೊಬ್ಬ ಗ್ರಾಹಕನಿಗೆ ಕ್ಷೌರ ಮಾಡುತ್ತಿದ್ದ ಸದಾಶಿವ ನಾವಿ ಈ ವೇಳೆ ಗರಂ ಆಗಿದ್ದಾನೆ. ಗ್ರಾಹಕ ಸಾಗರ ಅವಟಿ ಜತೆ ಜಗಳಕ್ಕೆ ಇಳಿದಿದ್ದಾನೆ. ಈ ಹಿಂದೆಯೂ ಸದಾಶಿವ ನಾವಿಯನ್ನು ಸಾಗರ ರೇಗಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ತನ್ನ ಎಲ್ಲ ಕೋಪವನ್ನು ವ್ಯಕ್ತಪಡಿಸಿ ಈ ಬಾರಿ ಜಗಳಕ್ಕೆ ಇಳಿದಿದ್ದ ಸದಾಶಿವ ನಾವಿ, ಸಾಗರನ ಎದೆಯ ಎಡಭಾಗಕ್ಕೆ ಕತ್ತರಿಯಿಂದ ಇರಿದು ಕೊಲೆ ಮಾಡಿದ್ದಾನೆ.

- Advertisement -

Related news

error: Content is protected !!