Thursday, April 25, 2024
spot_imgspot_img
spot_imgspot_img

ರೈಲಿನಿಂದ‌ ಬಿದ್ದು ವಿಟ್ಲದ ಯುವಕ‌ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ಕೇರಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ವಿಟ್ಲ ಮೂಲದ ಯುವಕ ಅಸುನೀಗಿದ ಘಟನೆ ನಡೆದಿದೆ. ವಿಟ್ಲ ಸಮೀಪದ ಕೊಡಂಗೆಯ ಎಂಬಲ್ಲಿನ ಯುವಕ ಮೃತಪಟ್ಟಿದ್ದಾರೆ.

ವಿಟ್ಲ ಸಮೀಪದ ಕೊಡಂಗೆ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು‌ ಮೂಲಗಳು ತಿಳಿಸಿದೆ.

- Advertisement -

Related news

error: Content is protected !!