Friday, April 26, 2024
spot_imgspot_img
spot_imgspot_img

ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ಅಸ್ತಂಗತ

- Advertisement -G L Acharya panikkar
- Advertisement -

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬೆಂಗಳೂರಿನ ಕಂಟೋನ್ಮಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ.

ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಬೆಂಗಳೂರಿಗೆ ಆಗಮಿಸಿದ್ದರು. ವಾಪಸ್ ಯಾದಗಿರಿಗೆ ಹೋಗಲು ಬೆಂಗಳೂರಿನ ಕಂಟೋನ್ಮಂಟ್ ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ನಡೆದುಕೊಂಡು ಹೋಗುತ್ತಿರುವಾಗಲೇ ಸ್ವಾಮೀಜಿ ಕುಸಿದು ಬಿದ್ದಿದ್ದಾರೆ.

ಭಕ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಸ್ವಾಮೀಜಿ ಮಾರ್ಗಮಧ್ಯೆಯೇ ಇಹಲೋಕ ತ್ಯಜಿಸಿದರು. ಶಹಪೂರ ತಾಲೂಕಿನ ದೋರನಹಳ್ಳಿ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದ್ದು, ಇತಿಹಾಸ ಮತ್ತು ಪರಂಪರೆ ಹೊಂದಿದೆ.

- Advertisement -

Related news

error: Content is protected !!