- Advertisement -
- Advertisement -
ಕುಂದಾಪುರ: ಪ್ರೀತಿಸುವ ನಾಟಕವಾಡಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪ್ರೇಮಿ ಕೈಕೊಟ್ಟ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು. ಸಾವಿನ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ ಬಲೆಗೆ ಬಿದ್ದಿದ್ದಳು. ಮದುವೆಯಾಗುವುದಾಗಿ ನಂಬಿಸಿ ಅಜೀಜ್ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟಿದ್ದ. ಇಬ್ಬರ ನಡುವೆ ನಡೆದಿರುವ ದೈಹಿಕ ಸಂಪರ್ಕದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ. ಇದರಿಂದ ಮನನೊಂದಿದ್ದ ಯುವತಿ ಇಲಿ ಪಾಷಾಣ ಸೇವಿಸಿದ್ದಳು. ಮೂರು ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಪ್ರಾಣ ಬಿಟ್ಟಿದ್ದಳು.
- Advertisement -