ನವದೆಹಲಿ: ಮುಸ್ಲಿಂ ಯುವಕನೊಂದಿಗೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಗೆಳತಿಯ ಭೀಖರ ಹತ್ಯೆ ದೇಶವನ್ನೇ ಬೆಚ್ಚಿಬೀಳಿಸಿದೆ. ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಲ್ಲಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಒಂದೊಂದಾಗಿಯೇ ಬಯಲಾಗುತ್ತಿವೆ.
ದೆಹಲಿ ಕಾಡಿನಲ್ಲಿ ವಿಲೇವಾರಿ ಮಾಡಿದ್ದ ಹಂತಕ..!
ಅಫ್ತಾಬ್(28) ಹಾಗೂ ಶ್ರದ್ಧಾ (27) ಇಬ್ಬರು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. 3 ವರ್ಷದ ಹಿಂದೆ ಮುಂಬೈನಲ್ಲಿ ಭೇಟಿಯಾಗಿದ್ದರು. ಅವರು ಅದಾದ ಬಳಿಕ ದೆಹಲಿಗೆ ಬಂದು ಅಲ್ಲೂ ಲಿವಿಂಗ್ ಇನ್ ರಿಲೆಷನ್ಶಿಪ್ನಲ್ಲಿದ್ದರು. ಅದಾದ ಬಳಿಕ ಇಬ್ಬರ ಮಧ್ಯೆ ಮದುವೆ ವಿಚಾರವಾಗಿ ಆಗಾಗ ಜಗಳವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಶ್ರದ್ಧಾಳನ್ನು ಅಫ್ತಾಬ್ ಕೊಲೆ ಮಾಡಿ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಲ್ಲಿಟ್ಟಿದ್ದ. ಅದಾದ ಬಳಿಕ ಶ್ರದ್ಧಾಳ ದೇಹದ ಭಾಗಗಳನ್ನು ದೆಹಲಿ ಕಾಡಿನಲ್ಲಿ ವಿಲೇವಾರಿ ಮಾಡಿದ್ದ.
ಮೃತದೇಹ ಫ್ರಿಡ್ಜ್ನಲ್ಲಿ..! ಮತ್ತೊಬ್ಬಳೊಂದಿಗೆ ಸರಸ..!
ಕೊಲೆಗಾರ ಅಫ್ತಾಬ್, ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.
ಅಷ್ಟೇ ಅಲ್ಲದೇ ಅಫ್ತಾಬ್ ಮೂರರಿಂದ ನಾಲ್ಕು ಯುವತಿಯರೊಂದಿಗೆ ಏಕಕಾಲದಲ್ಲಿ ಸಂಪರ್ಕ ಹೊಂದಿದ್ದ ಎನ್ನುವ ಅಂಶ ಬಹಿರಂಗವಾಗಿದೆ. ಆ ಯುವತಿಯನ್ನು ಆಗಾಗ ಮನೆಗೂ ಕರೆ ತಂದು ಸುಖ ಅನುಭವಿಸುತ್ತಿದ್ದ. ಆ ವೇಳೆ ಶ್ರದ್ಧಾಳ ದೇಹದ ಭಾಗಗಳನ್ನು ಫ್ರಿಡ್ಜ್ನಿಂದ ತೆಗೆದು ಕಬೋರ್ಡ್ನಲ್ಲಿ ಇಡುತ್ತಿದ್ದ ಎಂಬ ವಿಷಯ ಇದೀಗ ಬಯಲಾಗಿದೆ.
ಮೇ 18ರಂದು ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ..!
ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಏಪ್ರಿಲ್ನಲ್ಲಿ ದೆಹಲಿಗೆ ತೆರಳಿದರು. ಅವರಿಬ್ಬರ ಮಧ್ಯೆ ಒಂದು ಜಗಳ ಉಲ್ಬಣಗೊಂಡಿದೆ. ಮೇ 18ರಂದು ಶ್ರದ್ಧಾಳನ್ನು ಕತ್ತು ಹಿಸುಕಿ ಅಫ್ತಾಬ್ ಕೊಲೆ ಮಾಡಿದ್ದ. ಬಾಣಸಿಗನ ತರಬೇತಿ ಪಡೆದಿದ್ದ ಅಫ್ತಾಬ್, ಶ್ರದ್ಧಾಳ ದೇಹವನ್ನು ಕತ್ತರಿಸುವ ಮೊದಲು ರಕ್ತದ ಕಲೆಗಳನ್ನು ಅನ್ನು ಹೇಗೆ ಸ್ವಚ್ಛಗೊಳಿಸಬಹುದು ಎಂದು ಗೂಗಲ್ ಸರ್ಚ್ ಮಾಡಿದ್ದನು. ಅಂತೆಯೇ ಹೈಲೀ ಎಜ್ಯುಕೇಟೆಡ್ ಥರ ನಡೆದುಕೊಳ್ಳುತ್ತಿದ್ದ ಎಂಬ ವಿಷಯವೂ ತಿಳಿದುಬಂದಿದೆ.
ನನ್ನನ್ನು ಕೊಲ್ಲುತ್ತಾನೆ. ರಕ್ಷಿಸುವಂತೆ ಮನವಿ ಮಾಡಿದ್ದ ಶ್ರದ್ಧಾ..!
ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನ ಕ್ರೂರತೆಯನ್ನು ಮೊದಲೇ ಶ್ರದ್ಧಾ(27) ತನ್ನ ಸ್ನೇಹಿತ ಲಕ್ಷ್ಮಣ್ ನಾಡಾರ್ ಜೊತೆ ಹೇಳಿಕೊಂಡಿದ್ದಳಂತೆ. ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ್, ಶ್ರದ್ಧಾ ಹಾಗೂ ಅಫ್ತಾಬ್ ನಡುವೆ ಆಗಾಗ ಅನೇಕ ಜಗಳಗಳು ಹಾಗೂ ವಾದಗಳು ನಡೆಯುತ್ತಿದ್ದವು. ಒಮ್ಮೆ ಆಕೆ ನನ್ನನ್ನು ವಾಟ್ಸಪ್ ಮೂಲಕ ಸಂಪರ್ಕಿಸಿದ್ದಳು.
ಅಷ್ಟೇ ಅಲ್ಲದೇ ಆಕೆ ಆ ರಾತ್ರಿ ಅವನೊಂದಿಗೆ ತಾನು ಇಲ್ಲೇ ಉಳಿದುಕೊಂಡರೆ ಆತ ತನ್ನನ್ನು ಕೊಲ್ಲುತ್ತಾನೆ. ದಯವಿಟ್ಟು ತನ್ನನ್ನು ಅವನ ನಿವಾಸದಿಂದ ರಕ್ಷಿಸುವಂತೆ ಬೇಡಿಕೊಂಡಿದ್ದಳು ಎಂದು ಮಾಹಿತಿ ನೀಡಿದರು.
ಅದಾದ ಬಳಿಕ ಸ್ನೇಹಿತರೊಂದಿಗೆ ಸೇರಿ ಶ್ರದ್ಧಾಳನ್ನು ಛತ್ತರ್ಪುರದ ಆತನ ನಿವಾಸದಿಂದ ರಕ್ಷಿಸಿದ್ದೆವು. ಅಷ್ಟೇ ಅಲ್ಲದೇ ಘಟನೆಗೆ ಸಂಬಂಧಿಸಿ ಪೊಲೀಸರನ್ನು ಸಂಪರ್ಕಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದೆವು. ಆದರೆ ಶ್ರದ್ಧಾ ಆಫಾಬ್ನನ್ನು ಪ್ರೀತಿಸುತ್ತಿದ್ದರಿಂದ ಪೊಲೀಸರಿಗೆ ತಿಳಿಸಿರಲಿಲ್ಲ ಎಂದಿದ್ದಾರೆ.
ಕೊಲೆ ಬಳಿಕ ಏನೂ ಆಗಿಲ್ಲ ಎಂಬಂತಿದ್ದ ಅಫ್ತಾಬ್..!
ಕೊಲೆಗೈದ ಬಳಿಕ ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದ್ದ. ಕೂಲ್ ಆಗಿಯೇ ಇದ್ದ. ಆಕೆಯ ಫೋನ್ ಇಟ್ಟುಕೊಂಡಿದ್ದ ಆಫ್ತಾಬ್ ಆಕೆಯ ಸ್ನೇಹತರೊಂದಿಗೆ ಚಾಟ್ ನಡೆಸುತ್ತಿದ್ದ. ಇದರಿಂದ ಯಾವುದೇ ರೀತಿಯ ಅನುಮಾನ ಬರದಂತೆ ನೋಡಿಕೊಂಡಿದ್ದ.
ಕಾಡಿನಲ್ಲಿ ಮಜಹರು..! – ಡಿಎನ್ಐ ಪರೀಕ್ಷೆ
ಹಂತಕನನ್ನು ಬಂಧಿಸಿರುವ ಪೊಲೀಸರು ಆತ ಎಲ್ಲೆಲ್ಲಿ ಮೃತದೇಹದ ತುಂಡುಗಳನ್ನು ಎಸೆದಿದ್ದಾನೆ ಎಂದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಅಲ್ಲಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದು ಡಿಎನ್ಎ ಪರೀಕ್ಷೆಗೆ ರವಾನಿಸಲಾಗಿದೆ. ತಂದೆ ಇದು ವ್ಯವಸ್ಥಿತ ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ. ಮುಂಬೈನಲ್ಲಿ ಹತ್ಯೆ ಖಂಡಿಸಿ ಪ್ರತಿಭಟನೆಯೂ ನಡೆದಿದೆ.