Sunday, May 19, 2024
spot_imgspot_img
spot_imgspot_img

ಲೌಡ್ ಸ್ಪೀಕರ್ ನಿಯಂತ್ರಣ ವಿಚಾರ: ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ಸರ್ಕಾರ ರಿಯಾಯಿತಿ ನೀಡಬೇಕು; ಭಾಗವತ ಸತೀಶ್ ಪಟ್ಲ

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣ ವಿಚಾರವಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದ ಯಕ್ಷಗಾನ ಕಲಾವಿದರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಯಕ್ಷಗಾನಕ್ಕೆ ಯಾವುದೇ ಧರ್ಮದ ತಡೆಯಿಲ್ಲ. ಎಲ್ಲಾ ಧರ್ಮದವರು ಯಕ್ಷಗಾನವನ್ನು ಆಡಿಸುತ್ತಾರೆ. ಸರ್ಕಾರದ ಸೌಂಡ್ ಡಿಸಿಬಲ್ ನೀತಿಯಡಿ ಯಕ್ಷಗಾನ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಯಕ್ಷಗಾನ ಶೇ 99 ರಷ್ಟು ರಾತ್ರಿಯಿಂದ ಮುಂಜಾನೆಯವರೆಗೆ ನಡೆಯುತ್ತದೆ. ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮೇಳದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

vtv vitla
- Advertisement -

Related news

error: Content is protected !!