Friday, March 29, 2024
spot_imgspot_img
spot_imgspot_img

ವಕೀಲರ ವೇಷದಲ್ಲಿ ಬಂದ ಹಂತಕರಿಂದ ಘೋರ ಕೃತ್ಯ; ಕೋರ್ಟ್ ಆವರಣದಲ್ಲೇ ಶೂಟೌಟ್ ನಾಲ್ವರು ಸಾವು!

- Advertisement -G L Acharya panikkar
- Advertisement -

ನವದೆಹಲಿ: ದೆಹಲಿಯ ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಫೈರಿಂಗ್ ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ ಬಂದ ಹಂತಕರು ಜಿತೇಂದ್ರ ಯೋಗಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಇಬ್ಬರು ಹಂತಕರ ಮೇಲೆ ಫೈರಿಂಗ್ ಮಾಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ. ಕೋರ್ಟ್ ಆವರಣದಲ್ಲಿಯೇ ನಡೆದ ಈ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಸೇರಿ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

driving
- Advertisement -

Related news

error: Content is protected !!