Saturday, May 4, 2024
spot_imgspot_img
spot_imgspot_img

ವರದಕ್ಷಿಣೆ ಕಿರುಕುಳ ತಾಳದೇ ಮಗನೊಂದಿಗೆ ನೇಣಿಗೆ ಶರಣಾದ ತಾಯಿ..! ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್

- Advertisement -G L Acharya panikkar
- Advertisement -

ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. 5 ವರ್ಷಗಳ ಕಾಲ ಸಂಸಾರ ಮಾಡಿದ್ದರು. ಆದರೆ ಹಣದ ದಾಹದಿಂದ ಗಂಡನಾದವ ಪದೇ ಪದೇ ತವರು ಮನೆಯಿಂದ ವರದಕ್ಷಿಣೆ ತಂದು ಕೊಡೆಂದು ಪೀಡಿಸುತ್ತಿದ್ದ. ಕಿರುಕುಳ ತಾಳದೇ ಮಹಿಳೆ ಮಗನ ಜೊತೆ ನೇಣಿಗೆ ಶರಣಾಗಿ ಬಾರದ ಲೋಕಕ್ಕೆ ಪ್ರಯಾಣ ಬೆಳಿಸಿದ್ದಾಳೆ..!

ವರದಕ್ಷಿಣೆ ಕಿರುಕುಳ ತಾಳದೇ ಮಗನ ಜೊತೆ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಯನಾ(27) ಮತ್ತು ಗುರು(4) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ, ಮಗ..!

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಸೊರಬ ಪೊಲೀಸರು ಪತಿ ಶರತ್ ನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!