- Advertisement -
- Advertisement -
ಶಿವಮೊಗ್ಗ; ವಾಹನಗಳನ್ನು ಜಖಂ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೈಯದ್ ಪರ್ವೇಜ್ ಎಂಬುವರು ಈ ಕುರಿತು ದೂರು ನೀಡಿದ್ದು, ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ತನ್ನ ಕಾರನ್ನು ಜಖಂ ಗೊಳಿಸಲಾಗಿದೆ ಎಂದು ದೊಡ್ಡಪೇಟೆ ಠಾಣಾ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ಟೋಬರ್ 22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥ ಆಯೋಜಿಸಲಾಗಿತ್ತು. ಈ ಜಾಥಾದಲ್ಲಿ ಹರ್ಷ ಸಹೋದರಿ ಅಶ್ವಿನಿ ಕೂಡ ಭಾಗಿಯಾಗಿದ್ದಳು. ಜಾಥಾ ಸಾಗುತ್ತಿದ್ದಾಗ ಆಜಾದ್ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಇನೊವಾ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಅನ್ನು ಜಖಂಗೊಳಿಸಿರುವುದಾಗಿ ಆರೋಪಿಸಲಾಗಿದೆ.
ಈ ಬಗ್ಗೆ ಕಾರು ಮಾಲೀಕ ಸೈಯದ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
- Advertisement -