Friday, May 10, 2024
spot_imgspot_img
spot_imgspot_img

ವಿಚ್ಚೇದನಕ್ಕೆ ಮುಂದಾದ ಹಿಂದೂ ಧರ್ಮದ ಪತ್ನಿಯನ್ನು ಮಾರಕಾಸ್ತ್ರದಿಂದ ಹಲ್ಲೆಗೈದ ಪ್ರಕರಣ; ಆರೋಪಿ ಇಝಾಜ್ ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಆತನನ್ನು ನಾವೇ ಕೊಚ್ಚಿ ಹಾಕುತ್ತೇವೆ; ಪ್ರಮೋದ್ ಮುತಾಲಿಕ್

- Advertisement -G L Acharya panikkar
- Advertisement -

ಹುಬ್ಬಳ್ಳಿ: ಗದಗದಲ್ಲಿ ಕೌಟುಂಬಿಕ ಕಲಹದ ಕೇಸ್ ಗೆ ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಧ್ಯಪ್ರವೇಶಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.

ಗದಗದಲ್ಲಿ ಹಿಂದೂ ಯುವತಿಯನ್ನು ಪ್ರೀತಿಸಿ ಇಜಾಝ್ ಎಂಬಾತ 5 ವರ್ಷದ ಹಿಂದೆ ವಿವಾಹವಾಗಿದ್ದ. ಅವರಿಗೆ ಒಂದು ಮಗು ಕೂಡ ಇದೆ. ಇತ್ತೀಚೆಗೆ ಇಜಾಝ್ ಪತ್ನಿ ವಿಚ್ಛೇಧನಕ್ಕೆ ಮುಂದಾಗಿದ್ದಳು. ಇದರಿಂದ ಕೋಪಗೊಂಡ ಪತಿ ಇಜಾಝ್, ಪತ್ನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದ.

vtv vitla
vtv vitla

ಈ ಬಗ್ಗೆ ಪತಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಮಹಿಳೆಯ ಆರೋಗ್ಯ ವಿಚಾರಿಸಿ ಮಾತನಾಡಿದ ಮುತಾಲಿಕ್, ಇದೊಂದು ಲವ್ ಜಿಹಾದ್ ಪ್ರಕರಣ. ತನ್ನ ಪ್ರಿಯತಮ ಇಜಾಜ್ ಶಿರೂರನನ್ನು 2018 ರಂದು ಹಿಂದೂ ಧರ್ಮದ ಯುವತಿ ಮದುವೆ ಆಗಿದ್ದಾಳೆ. ಅವಳ ಮೇಲೆ 2 ದಿನಗಳ ಹಿಂದೆ ಗದಗ ಪಟ್ಟಣದಲ್ಲಿ ಮಚ್ಚಿನಿಂದ 23 ಬಾರಿ ಮನಬಂದಂತೆ ಹಲ್ಲೆ ಮಾಡಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಇಜಾಜ್ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಹದಿಹರೆಯದ ಹೆಣ್ಣು ಮಕ್ಕಳು ಪ್ರೀತಿಯಲ್ಲಿ ಬಿಳೋ ಮುಂಚೆ ಈ ಘಟನೆ ನೆನಪಿಸಿಕೊಳ್ಳಬೇಕು. ಅಲ್ಲದೇ ಆ ಮನೆಯನ್ನು ಮೌಲ್ವಿಗಳು ಬಹಿಷ್ಕಾರ ಹಾಕಬೇಕು. ಪೊಲೀಸರು ಸಣ್ಣ ಕೇಸ್ ಹಾಕಿ ಬಿಟ್ಟರೆ ಇಜಾಝ್ ನನ್ನು ನಾವೇ ಕೊಚ್ಚಿ ಕೊಚ್ಚಿ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

vtv vitla
vtv vitla
- Advertisement -

Related news

error: Content is protected !!