- Advertisement -
- Advertisement -
ವಿಟ್ಲದ ಉಕ್ಕುಡದಿಂದ ಜಲ್ಲಿ ಹೇರಿಕೊಂಡು ಬದಿಯಡ್ಕದತ್ತ ಹೋಗುತ್ತಿದ್ದ ಲಾರಿಯು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಈ ಘಟನೆ ಪೆರ್ಲ ಸಮೀಪದ ನಲ್ಕ ಎಂಬಲ್ಲಿ ನಡೆದಿದೆ.
ವಿಟ್ಲದ ಉಕ್ಕುಡದಿಂದ ಜಲ್ಲಿ ಹೇರಿಕೊಂಡು ಬರುತ್ತಿದ್ದ ಲಾರಿಯಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಲಾರಿ ಯನ್ನು ನಿಲ್ಲಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿ ಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹೆಚ್ಚಿನ ಅನಾಹುತ ತಪ್ಪಿಸಿದರು . ಲಾರಿಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
- Advertisement -