- Advertisement -
- Advertisement -
ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಆರೋಗ್ಯ ಅಧಿಕಾರಿ ಶಾಜಿತ್ ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್ಗಳನ್ನು ಸೀಝ್ ಮಾಡಿದ್ದಾರೆ.
ಅಂತೆಯೇ ಏಕಬಳಕೆಯ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿ, ಇನ್ನೂ ಮುಂದೆ ಏಕಬಳಕೆಯ ಪ್ಲಾಸ್ಟಿಕ್ ಬಳಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.
ಈ ವೇಳೆ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಜೊತೆಗಿದ್ದರು.
- Advertisement -