ವಿಟ್ಲ: ಕುದ್ದುಪದವಿನಲ್ಲಿ ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಹಲ್ಲೆನಡೆಸಿದ ಆರೋಪಿಗಳನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳನ್ನು ಕೊಡಗು ಜಿಲ್ಲೆ ಸೋಮವಾರ ಪೇಟೆ ನಿವಾಸಿ ಕೆ. ಮಹಮ್ಮದ್ ಶರೀಫ್, ಉಕ್ಕುಡ ದರ್ಬೆ ನಿವಾಸಿ ಸಾದಿಕ್ ಎನ್ನಲಾಗಿದೆ.
ರಕ್ಷಿತ್ ಎಂಬವರು ಬೈಕ್ ನಲ್ಲಿ ಅಡ್ಯನಡ್ಕದಿಂದ ಮೈರದಲ್ಲಿರುವ ತನ್ನ ಮನೆಗೆ ಹೋಗುವ ಸಂದರ್ಭ ಮೈರ, ಕರವೀರ ಬಸ್ ಸ್ಟಾಂಡ್ ಬಳಿ ರಕ್ಷಿತ್ ಎಂಬವರಿಗೆ ತಲವಾರು ಮತ್ತು ರಾಡ್ ಗಳಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಈ ಬಗ್ಗೆ ಅಕ್ರ: ನಂಬ್ರ: 75/2022 ಕಲಂ: 504, 324, 143, 147, 148, 307 ಜೊತೆಗೆ 149 ಬಾಧಂಸಂ’ರಂತೆ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ತಲೆ ಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಎಸ್.ಪಿ ತಿಳಿಸಿದ್ದಾರೆ.
ಇದನ್ನೂ ಓದಿ: ವಿಟ್ಲ- ಅನ್ಯಕೋಮಿನ ತಂಡದಿಂದ ಹಲ್ಲೆಗೊಳಗಾದ ರಕ್ಷಿತ್ ಪರಿಸ್ಥಿತಿ ಚಿಂತಾಜನಕ..!