Friday, April 26, 2024
spot_imgspot_img
spot_imgspot_img

ವಿಟ್ಲ: ಅಪಘಾತ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

- Advertisement -G L Acharya panikkar
- Advertisement -

ವಿಟ್ಲ: ಅಪಘಾತ ಪ್ರಕರಣವೊಂದರ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಸಂತ ಡಿ ಹೆಚ್ ಎಂದು ಗುರುತಿಸಲಾಗಿದೆ. ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೊಂಡು 2013 ನೇ ಸಾಲಿನಲ್ಲಿ ನ್ಯಾಯಾಲಯವು 1 ವರ್ಷ ಸಜೆಯನ್ನು ವಿಧಿಸಿತ್ತು. ಆದರೆ ಆರೋಪಿ ಸುಮಾರು 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ನ್ಯಾಯಾಲಯದ ಆದೇಶದಂತೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದ ಎಸ್.ಐ.ಸಂದೀಪ್ ಅವರ ತಂಡ ಆರೋಪಿಯನ್ನು ‌ಬಂಧಿಸಿ‌ ನ್ಯಾಯಾಲಯಕ್ಕೆ ಹಾಜರುಡಿಸಿದ್ದಾರೆ.

- Advertisement -

Related news

error: Content is protected !!