- Advertisement -
- Advertisement -
ವಿಟ್ಲ: ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರ ಮೇಲೆ ತಪ್ಪು ಗ್ರಹಿಕೆಯಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಒಬ್ಬ ಆರೋಪಿಯ ಮೇಲೆ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಮ್ಮದ್ ಆರಿಫ್ ಕರೈ ವಿರುದ್ಧ ಪ್ರಕರಣ ದಾಖಲಾಗಿದೆ.
ನಿನ್ನೆ ರಾತ್ರಿಯೇ ಒಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಹಲ್ಲೆಗೊಳಗಾದ ಯುವತಿಯರು ವಿಟ್ಲ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಈ ಬಗ್ಗೆ ಎರಡು ಕಡೆಯವರು ರಾಜಿ ಮಾತುಕತೆ ಮೂಲಕ ಇತ್ಯಾರ್ಥಗೊಳಿಸಿದ್ದರು. ಇದೀಗ ಪೊಲೀಸರು ಸಾರ್ವಜನಿಕವಾಗಿ ಹಲ್ಲೆ ನಡೆಸಿದ ವಿಚಾರದಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಿಸಿಕೊಂಡು ಆರೋಪಿ ಕರೆ ನಿವಾಸಿ ಮಹಮ್ಮದ್ ಆರೀಫ್ ಎಂಬಾತನ್ನು ಬಿಡುಗಡೆಗೊಳಿಸಿದ್ದರು.
ಆದರೆ ಇದೀಗ ವಿಟ್ಲ ಪೊಲೀಸರು ಕರೈ ಇಬ್ರಾ ಹಿಂ ಅವರ ಪುತ್ರ ಮಹಮ್ಮದ್ ಆರಿಫ್ ಕರೈ ಮೇಲೆ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -