- Advertisement -
- Advertisement -
ವಿಟ್ಲ : ಕೆಲಸದಾಳು ಅಂಗಡಿ ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ನಡೆಸಿದ ಪ್ರಕರಣ ವಿಟ್ಲ ಕಸಬ ಗ್ರಾಮದ ರಂಗರಮಜಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನು ಅಲಿಯಾಸ್ ಮನೋಹರ ಬಂಧಿತ ಆರೋಪಿ.
ಜ 20 ರಿಂದ ಮಾ 20 ರವರೆಗೆ ಎರಡು ತಿಂಗಳ ಕಾಲ ವಿಟ್ಲ ಕಸಬ ಗ್ರಾಮದ ರಂಗರಮಜಲು ಮುರಳಿಧರ ಎಂಬವರ ಮನೆಯಲ್ಲಿ ಯಾರೂ ಇರಲಿಲ್ಲ .ಈ ಸಂದರ್ಭವನ್ನು ಬಳಸಿಕೊಂಡ ಆರೋಪಿಯು ಒಟ್ಟು 3,20,000 ಮೌಲ್ಯದ ಒಟ್ಟು 64 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನಗೈದಿದ್ದ. ಈ ಕುರಿತು ಮುರಳೀಧರರವರು ಠಾಣೆಗೆ ದೂರು ನೀಡಿದ್ದು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
- Advertisement -