ವಿಟ್ಲ: ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಇದರ ಐದನೇ ವಾರ್ಷಿಕ ಕಾರ್ಯಕ್ರಮದ ಹಾಗೂ ಆರ್.ಕೆ. ಕುಣಿತ ಭಜನಾ ತಂಡ ವಿಟ್ಲ ಇದರ ನೇತೃತ್ವದಲ್ಲಿ ನಡೆಯಲಿರುವ ಮನೆ ಮನೆ ಭಜನೆ ಮನ ಮನಗಳಲ್ಲಿ ಭಜನೆ ಹಾಗೂ ಸೇವಾ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಅಂಗವಾಗಿ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಜನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ವಿಟ್ಲ ಸೀಮೆಗೆ ಒಳಪಟ್ಟ ಹಿಂದೂ ಧಾರ್ಮಿಕ ಮುಖಂಡರ, ಸಂಘಟನಾ ಪ್ರಮುಖರ, ಭಜನಾ ಮಂಡಳಿಗಳ ಅಧ್ಯಕ್ಷ, ಕಾರ್ಯದರ್ಶಿಗಳ ಹಾಗೂ ಭಜನಾಸಕ್ತರ ಸಭೆಯನ್ನು ದಿನಾಂಕ 13.10.2022 ಗುರುವಾರ ಸಂಜೆ 05:30 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ಕರೆಯಲಾಗಿದೆ.
ಈ ಸಭೆಯಲ್ಲಿ ಹೆಚ್ಚಿನ ಹಿಂದೂ ಸಮಾಜ ಬಾಂಧವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಭಜನಾ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಪ್ರಧಾನ ಕಾರ್ಯದರ್ಶಿಯವರಾದ ಜಯರಾಮ್ ನಾಯ್ಕ್ ಕುಂಟ್ರಕಲ ಹಾಗೂ ಆರ್.ಕೆ. ಕಲಾ ಸಂಸ್ಥೆಗಳ ನಿರ್ದೇಶಕರಾದ ರಾಜೇಶ್ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.