Thursday, May 2, 2024
spot_imgspot_img
spot_imgspot_img

ವಿಟ್ಲ: ಆ.13ರಂದು ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ

- Advertisement -G L Acharya panikkar
- Advertisement -

ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ನಡೆಯಲಿದೆ.

ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ। ವಂ| ಡಾ| ಪೀಟರ್ ಪ್ಲಾವ್ ಸಲ್ಡಾನ್ಹಾ ಮಾಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂತ ರೀಟಾ ದೇವಾಲಯ, ಕಾಸ್ಸಿಯಾ ಧರ್ಮಗುರುಗಳಾದ ವ|ಫಾ ಎರಿಕ್ ಕ್ರಾಸ್ತ ವಹಿಸಲಿದ್ದಾರೆ.

ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲು, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಸಂಜೀವ ಮಠಂದೂರು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾೈಕ್‌ ಉಳಿಪ್ಪಾಡಿಗುತ್ತು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್‌, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ. ಆರ್. ಲೋಬೋ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ. ರಮಾನಾಥ ರೈ, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳ ಶೆಟ್ಟಿ, ಪಟ್ಟಣ ಪಂಚಾಯತ್ ವಿಟ್ಲದ ಸದಸ್ಯರಾದ ಅರುಣ್‌ ವಿಟ್ಲ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!