Tuesday, May 7, 2024
spot_imgspot_img
spot_imgspot_img

ವಿಟ್ಲ: ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಭಾಷಣ ಎಂದು ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ಪ್ರಕರಣ ದಾಖಲು

- Advertisement -G L Acharya panikkar
- Advertisement -

ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಮತ್ತು ಹಿಂದು ಜಾಗರಣ ವೇದಿಕೆ ವಿಟ್ಲ ಇದರ ಆಶ್ರಯದಲ್ಲಿ ಲವ್ ಜಿಹಾದ್, ಮತಾಂತರ, ಗೋಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಹಿಂದು ನಾಯಕರ ಅವಹೇಳನದ ವಿರುದ್ಧ ಬೃಹತ್ ಹಿಂದೂ ಜಾಗೃತಿ ಸಭೆಯಲ್ಲಿ ಹಿಂ.ಜಾ.ವೇ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಬಗ್ಗೆ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌.ಐ.ಆ‌ರ್‍ ದಾಖಲಾಗಿದೆ.

ಜೂ.6ರಂದು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಆಯೋಜಿಸಿದ್ದ ಬೃಹತ್ ಹಿಂದೂ ಜಾಗೃತಿ ಸಭೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ ಅವರು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರು ಬಂದಿದ್ದು, ಅದರನ್ವಯ ವಿಟ್ಲ ಪೊಲೀಸ್ ಠಾಣಾ ಅ.ಕ್ರ 90/2022 ಕಲಂ: 505(2) ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ವಿಟ್ಲ: ವಿ.ಹಿಂ.ಪ, ಬಜರಂಗದಳ – ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಬೃಹತ್ ಹಿಂದೂ ಜಾಗೃತಿ ಸಭೆ

- Advertisement -

Related news

error: Content is protected !!