Friday, March 29, 2024
spot_imgspot_img
spot_imgspot_img

ವಿಟ್ಲ: ಒಡಹುಟ್ಟಿದ ತಮ್ಮನನ್ನೇ ಕೊಲೆಗೈದ ಸಹೋದರನ ಬಂಧನ

- Advertisement -G L Acharya panikkar
- Advertisement -

ವಿಟ್ಲ: ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದ ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಐತಪ್ಪ ನಾಯ್ಕ(45) ಬಂಧಿತ ಆರೋಪಿ.

vtv vitla
vtv vitla

ಎಣ್ಮಕಜೆ ಗ್ರಾಮದ ಅಡ್ಯನಡ್ಕ ನಿವಾಸಿ ಬಾಲಪ್ಪ ನಾಯ್ಕ ಅವರು ಮಂಗಳವಾರ ಸಂಜೆ ತರವಾಡು ಮನೆಗೆ ತನ್ನ ತಾಯಿ ಜತೆ ಬಂದಿದ್ದರು.

ಮಂಗಳವಾರ ಹೊಸ ಮನೆಯಲ್ಲಿ ಗೊಂದೋಳು ಪೂಜೆ ನಡೆಯುತ್ತಿದ್ದು, ಈ ವೇಳೆ ಸಹೋದರರಿಬ್ಬರೂ ತಕಾರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನಲ್ಲಿ ಪಾಲು ಕೇಳಿದ ವಿಚಾರವಾಗಿ ಗಲಾಟೆ ಉಂಟಾಗಿದೆ. ಜಗಳ ತಾರಕ್ಕಕ್ಕೇರಿ ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಮಾನ್ಯ ಋಷಿಕೇಶ್ ಭಗವಾನ ಸೋನಾವಣೆ, ಐಪಿಎಸ್ ಮತ್ತು ಅಡಿಷನಲ್ ಎಸ್‌ಪಿ ಕುಮಾರಚಂದ್ರ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶ್ರೀ ಶಿವಾಂಶು ರಜಪೂತ ಐಪಿಎಸ್ ರವರುಗಳ ಮಾರ್ಗದರ್ಶನದಲ್ಲಿ ನಾಗರಾಜ್ ಹೆಚ್‌.ಇ ಪೊಲೀಸ್ ನಿರೀಕ್ಷಕರು ವಿಟ್ಲ ಠಾಣೆ ರವರ ನೇತೃತ್ವದಲ್ಲಿ ಪಿ ಎಸ್ ಐ ಮಂಜುನಾಥ ಟಿ, Pro.ಪಿ ಎಸ್ ಐ ಗಳಾದ ಧನಂಜಯ, ಬಿ.ಸಿ, ಜಯಶ್ರೀ ಪ್ರಭಾಕರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣದ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!