Friday, April 26, 2024
spot_imgspot_img
spot_imgspot_img

ವಿಟ್ಲ: ಓವರ್‌ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ; ರಾಷ್ಟ್ರೀಯ ಹೆದ್ದಾರಿ ಕೆಲ ಗಂಟೆಗಳ ಕಾಲ ಬಂದ್

- Advertisement -G L Acharya panikkar
- Advertisement -

ವಿಟ್ಲ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಇಂದು ಮುಂಜಾನೆ ನಡೆದಿದೆ. ಬಸ್ಸು ಓವರ್‍ ಟೇಕ್ ಮಾಡಿದ್ದು ಈ ಅವಘಡ ಮೂಲ ಕಾರಣ.

ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ನಿಂತಿದೆ. ಅಪಘಾತದಿಂದ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ. 6 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ.

ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಬಳಿಕ ಸಾರ್ವಜನಿಕರು ಸುಗಮ ಸಂಚಾರಕ್ಕೆ ಮಾಡಲು ಕಾರ್ಯಾಚರಣೆ ನಡೆಸಿದರು. ಬೆಳಿಗ್ಗೆ 9.30ರ ವೇಳೆಗೆ ಸುಗಮ ಸಂಚಾರ ಸಾಧ್ಯವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

Related news

error: Content is protected !!