- Advertisement -
- Advertisement -
ವಿಟ್ಲ: ಅಂಬಾಸಿಡರ್ ಕಾರಿನ ಚಾಲಕ ಕುಡಿತದ ಅಮಲಿನಲ್ಲಿ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಅಂಬಾಸಿಡರ್ ಕಾರು ಚಾಲಕ ನೆಲ್ಲಿಗುಡ್ಡೆ ನಿವಾಸಿ ಪ್ರವೀಣ್ ಗೌಡ ಎಂದು ತಿಳಿದು ಬಂದಿದೆ. ಕುಡಿತದ ಅಮಲಿನಲ್ಲಿ ಕಾರು ಚಲಾಯಿಸಿ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ರಿಕ್ಷಾ ಚಾಲಕ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
- Advertisement -