Friday, May 17, 2024
spot_imgspot_img
spot_imgspot_img

ವಿಟ್ಲ: ಕೆಲಿಂಜ ಕಲ್ಮಲೆ ರಕ್ಷಿತಾ ಅರಣ್ಯಕ್ಕೆ ಬೆಂಕಿ; ಅಪಾರ ನಷ್ಟ

- Advertisement -G L Acharya panikkar
- Advertisement -

ವಿಟ್ಲ: ಆಕಸ್ಮಿಕವಾಗಿ ಗುಡ್ಡೆಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಕೆಲಿಂಜ ಎಂಬಲ್ಲಿ ನಡೆದಿದೆ.

ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾ ಅರಣ್ಯಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಬೀಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ, ಬೆಂಕಿಯನ್ನು ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ. ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡೆ ಇದಾಗಿದ್ದು, ಕಾಡಿನಲ್ಲಿ ಕೋಟ್ಯಾಂತರ ರೂ.ಬೆಲೆ ಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹುತೇಕ ಮರಗಳು ಬೆಂಕಿಗಾಹುತಿಯಾಗಿದೆ.

ಇದರ ಜೊತೆಗೆ ರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಇದ್ದು, ಸಣ್ಣ ಸಣ್ಣ ಪ್ರಾಣಿಗಳು ಜೀವ ಕಳೆದುಕೊಂಡರೆ, ಉಳಿದ ಪ್ರಾಣಿಗಳು ಜೀವಭಯದಿಂದ ಕಾಡು ಬಿಟ್ಟು ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಬಾರಿಯೂ ಇದೇ ಮಾದರಿಯಲ್ಲಿ ಕಾಡಿಗೆ ಬೆಂಕಿ ಬಿದ್ದಿದ್ದು, ಅಪಾರ ನಷ್ಟ ಉಂಟಾಗಿತ್ತು. ಕಾಡಿನಲ್ಲಿ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಮೂರು ದಿನಗಳು ಬೇಕಾಗಿತ್ತು. ಕಾಡಿನ ಮಧ್ಯೆ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮ್ ರ್ ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದು, ಕಾರಣ ತಿಳಿದುಬಂದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಂ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!