Thursday, April 25, 2024
spot_imgspot_img
spot_imgspot_img

ವಿಟ್ಲ: ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸ್ಜಿದ್ ಆಡಳಿತ ಸಮಿತಿ, ವಿಟ್ಲ ಜಮಾಅತ್ ಯೂತ್ ವಿಂಗ್, ಎಸ್ ಕೆ ಎಸ್ ಎಸ್ ಎಫ್ ವಿಟ್ಲ ಕ್ಲಷ್ಟರ್ ವಿಖಾಯ ಇದರ ಜಂಟಿ ಆಶ್ರಯದಲ್ಲಿ ವಿಖಾಯ ರಕ್ತದಾನಿ ಬಳಗ ದ.ಕ.ಜಿಲ್ಲೆ ಹಾಗೂ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ಭಾನುವಾರ ನಡೆಯಿತು.

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಮಹಮ್ಮದಾಲಿ ಫೈಝಿ ಇರ್ಫಾನಿ ದುವಾಃ ಮೂಲಕ ಚಾಲನೆ ನೀಡಿದರು. ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಬ್ರಾಹಿಂ ಹಳೆಮನೆ, ಕಾರ್ಯದರ್ಶಿ ಇಸ್ಮಾಯಿಲ್ ಪರ್ತಿಪ್ಪಾಡಿ, ಹೊರೈಝನ್ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಹಾನೆಸ್ಟ್, ಎಸ್ ಕೆ ಎಸ್ ಎಸ್ ಎಫ್ ವಿಟ್ಲ ಕ್ಲಷ್ಟರ್ ಅಧ್ಯಕ್ಷ ರಿಯಾಜ್ ಕೆಲಿಂಜ, ಕಾರ್ಯದರ್ಶಿ ಇಸ್ಮಾಯಿಲ್ ಹನೀಫಿ.

ವಲಯ ವಿಖಾಯ ಅಧ್ಯಕ್ಷ ಎಂ ಎಸ್ ಹಮೀದ್, ಕಾರ್ಯದರ್ಶಿ ಹಂಝ ಕುರಿಯಪ್ಪಾಡಿ, ಕೆಲಿಂಜ ಜುಮಾ ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಮುನ್ನ, ಶರೀಫ್ ಪರಕಜೆ, ಯೂತ್ ವಿಂಗ್ ಅಧ್ಯಕ್ಷ ರಫೀಕ್ ಪೊನ್ನೋಟ್ಟು, ಹಕೀಂ ಅರ್ಶದಿ, ಕಲಂದರ್ ಪರ್ತಿಪ್ಪಾಡಿ, ಕೆಎಂಸಿ ಆಸ್ಪತ್ರೆಯ ಡಾ. ಹೀತೇಶ್, ಡಾ. ಇಮ್ರೀನ್ ಮೊದಲಾದವರು ಉಪಸ್ಥಿತರಿದ್ದರು.

driving
- Advertisement -

Related news

error: Content is protected !!