Thursday, April 25, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟ ಲೋಕಾರ್ಪಣೆ ಹಾಗೂ ಗಂಗಾಪೂಜೆ

- Advertisement -G L Acharya panikkar
- Advertisement -
vtv vitla

ವಿಟ್ಲ: ಬಂಟ್ವಾಳ ಶಾಸಕರ ನಿಧಿಯಿಂದ ನಿರ್ಮಾಣವಾದ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟದಲ್ಲಿ ಈ ದಿನ ಬೆಳಗ್ಗೆ ಗಂಗಾ ಪೂಜೆಯನ್ನು ವಿಟ್ಲ ಅರಮನೆಯ ಶ್ರೀ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು.

ಸಭೆಯ ಅಧ್ಯಕ್ಷತೆಯನ್ನು ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು. ವೇದಿಕೆಯಲ್ಲಿ ಅಜಯ ಟ್ರಸ್ಟಿನ ಸದಸ್ಯ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷರು ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!