Saturday, May 4, 2024
spot_imgspot_img
spot_imgspot_img

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಪ್ರಕರಣ; ಮದುಮಗನ ಮನೆ ಮೇಲೆ ದಾಳಿ; ದೂರು ದಾಖಲು

- Advertisement -G L Acharya panikkar
- Advertisement -
suvarna gold

ಕಾಸರಗೋಡು: ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ವರನ ಮನೆ ಮೇಲೆ ದಾಳಿ ನಡೆದಿದ್ದು, ಗೇಟ್ ನ ಗೋಡೆಗೆ ಕಾವಿ ಬಣ್ಣ ಬಳಿಯಲಾಗಿದೆ ಎಂದು ತಿಳಿದು ಬಂದಿದೆ.

ಬೇಕೂರು ಅಗರ್ತಿಮೂಲೆಯಲ್ಲಿರುವ ಮನೆಗೆ ಕಲ್ಲೆಸೆಯಲಾಗಿದ್ದು, ಮುಂಭಾಗದ ಎರಡು ಕಿಟಿಕಿ ಗಾಜುಗಳು ಹುಡಿಯಾಗಿವೆ.

ಜ.17 ರಂದು ಮುಂಜಾನೆ ಬೈಕ್ ನಲ್ಲಿ ಬಂದ ಯಾರೋ ಕಿಡಿಗೇಡಿಗಳು ಕೃತ್ಯ ನಡೆಸಿದ್ದು, ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಮುಂಜಾನೆ ಶಬ್ದ ಕೇಳಿ ಮನೆಯಲ್ಲಿದ್ದವರು ಬೊಬ್ಬೆ ಹಾಕಿದಾಗ ಇಬ್ಬರು ಬೈಕ್ ನಲ್ಲಿ ಪರಾರಿಯಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳಿಗಾಗಿ ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!